ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು. ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವದೇ ಹೊರತು ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವದಿಲ್ಲ. ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು - ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು. Acts / ಅಪೊಸ್ತಲರ ಕೃತ್ಯಗಳು 27 : 21 - 24